ಬೆಂಗಳೂರು: ರಾಜ್ಯದ ಎಲ್ಲಾ ದೇವಾಲಯಗಳು ಜೂನ್ 1 ರಿಂದ ಓಪನ್ ಆಗಲಿದ್ದು, ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು.
ಹೋಟೆಲ್, ರೆಸ್ಟೋರೆಂಟ್, ಶಾಪಿಂಗ್ ಮಾಲ್ ಆರಂಭಿಸಲು ಅವಕಾಶ ನೀಡುವಂತೆ ಅಖಿಲ ಭಾರತ ಶಾಪಿಂಗ್ ಮಾಲ್ ಮಾಲೀಕರ ಗಳ ಸಂಘ ಮತ್ತು ಹೋಟೆಲ್, ರೆಸ್ಟೋರೆಂಟ್ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ, ಮಾರ್ಗಸೂಚಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಜೊತೆಗೆ ಪತ್ರ ಬರೆದು ಹೋಟೆಲ್ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎನ್ನಲಾಗಿದೆ. ನಿಯಮಗಳನ್ನು ಪಾಲಿಸುವ ಮೂಲಕ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಸೇವೆ ಒದಗಿಸಲು ಅವಕಾಶ ನೀಡಬೇಕೆಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.