ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಇವತ್ತು ಒಂದೇ ದಿನ ಮಂಡ್ಯದಲ್ಲಿ 71 ಮಂದಿಗೆ ಕೊರೋನಾ ಇರುವುದು ದೃಢಪಟ್ಟಿದೆ.
ಬೆಳಗ್ಗೆ 62 ಮತ್ತು ಸಂಜೆ ವೇಳೆಗೆ 9 ಮಂದಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ಮುಂಬೈ ನಂಟಿನ ಕಾರಣದಿಂದ ಮಂಡ್ಯಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚಾಗಿದೆ. ಮುಂಬೈನಿಂದ ವಾಪಸ್ ಬಂದವರಲ್ಲಿ ಸೋಂಕು ತಗುಲಿರುವುದು ಗೊತ್ತಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು ಸಾತೇನಹಳ್ಳಿ ನಿವಾಸಿ ಮುಂಬೈನಿಂದ ಕರ್ಜೂರ ಸಾಗಿಸುವ ವಾಹನದಲ್ಲಿ ಆಗಮಿಸಿದ್ದರು. ಅವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಬಳಿಕ ಮಹಾರಾಷ್ಟ್ರದಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಪಾಂಡವಪುರ ತಾಲೂಕಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಿದ್ದು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದವರಲ್ಲೂ ಕೊರೋನಾ ಪಾಸಿಟಿವ್ ಕಂಡುಬಂದಿತ್ತು.
ಇದಾದ ನಂತರ ಕೆಲಸ ಸೇರಿದಂತೆ ವಿವಿಧ ಕಾರಣಗಳಿಂದ ಮುಂಬೈನಲ್ಲಿ ನೆಲೆಸಿದ್ದ ಮಂಡ್ಯ ಜಿಲ್ಲೆ ಕೆಆರ್ ಪೇಟೆ, ನಾಗಮಂಗಲ ತಾಲೂಕಿನ ಜನ ತವರಿಗೆ ಮರಳಿದ್ದಾರೆ. ಇವರಲ್ಲಿ ಹೆಚ್ಚಿನವರಿಗೆ ಕೊರೋನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಧೃಢಪಟ್ಟಿದೆ.