alex Certify ನವ ವಿವಾಹಿತೆಯಿಂದ ದುಡುಕಿನ ನಿರ್ಧಾರ: ಪೋಷಕರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವ ವಿವಾಹಿತೆಯಿಂದ ದುಡುಕಿನ ನಿರ್ಧಾರ: ಪೋಷಕರಿಗೆ ಬಿಗ್ ಶಾಕ್

ಗದಗ: ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ನಂದೀಶ್ವರ ಮಠ ಸಮೀಪ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

21 ವರ್ಷದ ಯುವತಿಗೆ ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದು, ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಕ್ಡೌನ್ ಜಾರಿಯಾಗುವ ಮೊದಲೇ ಮದುವೆ ನಿಶ್ಚಯವಾಗಿದ್ದು ಮದುವೆ ಮುಂದೂಡುವುದು ಬೇಡವೆಂದು ಮನೆಯವರು, ಸಂಬಂಧಿಕರು ಸೇರಿ ಲಕ್ಷ್ಮೇಶ್ವರದಲ್ಲಿ ಸರಳವಾಗಿ ಮದುವೆ ನೆರವೇರಿಸಿದ್ದಾರೆ.

ಮನೆಯಲ್ಲಿ ಪೋಷಕರು, ಸಂಬಂಧಿಕರು ಇದ್ದ ಸಂದರ್ಭದಲ್ಲಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಹು ಹೊತ್ತಿನವರೆಗೂ ಸ್ನಾನದ ಕೋಣೆಯಿಂದ ಯುವತಿ ಹೊರ ಬಾರದ ಹಿನ್ನಲೆಯಲ್ಲಿ ಮನೆಯವರು ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ಕಾರಣ ಗೊತ್ತಾಗಿಲ್ಲ. ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...