ಮಾಗಡಿ: ಲಾಕ್ಡೌನ್ ಜಾರಿಯಾಗಿರುವುದರಿಂದ ಅನೇಕ ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಂದ ಹಾಲು ಖರೀದಿ ನಿಲ್ಲಿಸಿದ ಕಾರಣ ಸರ್ಕಾರವೇ ಒಕ್ಕೂಟಗಳಿಂದ ಹಾಲು ಖರೀದಿಸಿ ಬಡವರಿಗೆ ಉಚಿತವಾಗಿ ನೀಡುತ್ತಿದೆ.
ಈ ನಡುವೆ ಹಾಲು ಖರೀದಿ ದರವನ್ನು ತಾತ್ಕಾಲಿಕವಾಗಿ ಇಳಿಕೆ ಮಾಡಲಾಗಿದೆ. ಉತ್ಪಾದಕರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 1.50 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಬೆಂಗಳೂರು ಡೈರಿ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದ್ದಾರೆ.
ಲಾಕ್ ಡೌನ್ ನಿಂದಾಗಿ ಪ್ರತಿದಿನ ಮೂರು ಲಕ್ಷ ಲೀಟರ್ ಹೆಚ್ಚುವರಿ ಹಾಲು ಉಳಿತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದರ ಕಡಿಮೆ ಮಾಡಲಾಗಿದೆ. ಲಾಕ್ಡೌನ್ ಮುಗಿದ ಬಳಿಕ ಹಿಂದಿನ ರೀತಿಯಲ್ಲಿಯೇ ಉತ್ಪಾದಕರಿಗೆ ಹಾಲಿನ ದರ ನೀಡಲಾಗುವುದು ಎಂದು ಹೇಳಿದ್ದಾರೆ.