alex Certify ʼಲಾಕ್​ ಡೌನ್ʼ​ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್​ ನಿರಾಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಲಾಕ್​ ಡೌನ್ʼ​ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್​ ನಿರಾಣಿ

ರಾಜ್ಯದಲ್ಲಿ ಲಾಕ್​ಡೌನ್​ ಆದೇಶದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಲಾಕ್​ಡೌನ್​​ ಆದೇಶವನ್ನ ಮುಂದುವರಿಸಲಿದ್ಯಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ. ಇದೇ ವಿಚಾರವಾಗಿ ಕಲಬುರಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್​ ನಿರಾಣಿ ಲಾಕ್​ಡೌನ್​ ಮುಂದುವರಿಕೆ ಬಗ್ಗೆ ಸೂಚನೆ ನೀಡಿದ್ರು.

ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡುಬರ್ತಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕನ್ನ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗ್ತಿದೆ. ಸದ್ಯದ ಪರಿಸ್ಥಿತಿ ನೋಡ್ತಿದ್ರೆ ಲಾಕ್​ಡೌನ್​ ಮುಂದುವರಿಸೋದೇ ಉತ್ತಮ ಎನಿಸ್ತಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪರಿಗೂ ಮನವಿ ಮಾಡಿದ್ದೇನೆ. ಇನ್ನೂ ಹತ್ತು ದಿನಗಳ ಲಾಕ್​ಡೌನ್​ ಅವಧಿ ವಿಸ್ತರಿಸಿದ್ರೆ ಉತ್ತಮ ಅನ್ನೋದು ನನ್ನ ಅಭಿಪ್ರಾಯವಾಗಿದೆ ಎಂದು ಹೇಳಿದ್ರು.

ಇನ್ನು ರಾಜ್ಯದಲ್ಲಿ ಆಕ್ಸಿಜನ್​ ಅಭಾವದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವ್ರು, ರಾಜ್ಯದಲ್ಲಿ ಪ್ರಾಣವಾಯುವಿನ ಕೊರತೆ ನೀಗಿಸಲು ಗಣಿ ಇಲಾಖೆಯಿಂದ 10 ಟ್ಯಾಂಕರ್​ ನೀಡ್ತಿದ್ದೇವೆ. ಹತ್ತು ದಿನದಲ್ಲಿ ಪ್ರತಿ ವಿಭಾಗಕ್ಕೆ ಎರಡೆರಡು ಆಕ್ಸಿಜನ್​ ಟ್ಯಾಂಕರ್​ ನೀಡಲಾಗುತ್ತದೆ. ಮೂರನೇ ಅಲೆಗೆ ಬೇಕಾದ ಎಲ್ಲಾ ಕ್ರಮಗಳನ್ನ ನಾವು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...