alex Certify BIG NEWS: ಇಂದು ಆರ್.ಆರ್. ನಗರ ಚುನಾವಣೆ ತೀರ್ಪು, ಮುನಿರತ್ನಗೆ ಟಿಕೆಟ್ ಡೌಟ್..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದು ಆರ್.ಆರ್. ನಗರ ಚುನಾವಣೆ ತೀರ್ಪು, ಮುನಿರತ್ನಗೆ ಟಿಕೆಟ್ ಡೌಟ್..?

ಬೆಂಗಳೂರು: 2018 ರ ವಿಧಾನಸಭೆ ಚುನಾವಣೆ ವೇಳೆ ಆರ್.ಆರ್. ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು ಬಿಜೆಪಿ ಮುಖಂಡ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯ ಕುರಿತಾದ ಆದೇಶ ಇವತ್ತು ಹೊರ ಬೀಳಲಿದೆ.

ಸುಪ್ರೀಂ ಕೋರ್ಟ್ ಇವತ್ತು ತೀರ್ಪು ನೀಡಲಿದ್ದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮುನಿರತ್ನ ಅವರ ಭವಿಷ್ಯವನ್ನು ನಿರ್ಧರಿಸುವ ಸಾಧ್ಯತೆ ಇದೆ.

ಇನ್ನು ಉಪ ಚುನಾವಣೆಗೆ ಆರ್.ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಪ್ರಚಾರ ನಡೆಸಿದ್ದು ಬಿಜೆಪಿ ಅಭ್ಯರ್ಥಿ ಆಯ್ಕೆ ಜಟಿಲವಾಗಿದೆ. ಮುನಿರತ್ನ ಮತ್ತು ಮುನಿರಾಜು ಗೌಡ ಅವರ ನಡುವೆ ಟಿಕೆಟ್ ಗಾಗಿ ಪೈಪೋಟಿ ಇದೆ. ವರಿಷ್ಠರಿಗೆ ಟಿಕೆಟ್ ಹಂಚಿಕೆ ತಲೆನೋವಾಗಿ ಪರಿಣಮಿಸಿದೆ.

ಮುನಿರತ್ನ ಅವರಿಗೆ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಇಲ್ಲವೆನ್ನಲಾಗಿದ್ದು ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಕುರಿತಂತೆ ಆಪ್ತರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...