ಗಂಗಾವತಿ: 15 ವರ್ಷಗಳ ಹಿಂದೆ ನಡೆದ ಕೊಲೆಯ ರಹಸ್ಯವನ್ನು ಬಯಲಿಗೆಳೆದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಸೇರಿ ಐವರನ್ನು ಬಂಧಿಸಿದ್ದಾರೆ.
ಲಕ್ಷ್ಮೀ ಸಿಂಗ್ ಹಾಗೂ ಕೊಲೆಗೆ ಸಹಕಾರ ನೀಡಿದ ಅಮ್ಜದ್ ಖಾನ್, ಅಬ್ದುಲ್ ಆಫೀಜ್, ಬಾಬಾ ಜಾಕೀರ್ ಭಾಷಾ, ಶಿವನಗೌಡ ಬಂಧಿತ ಆರೋಪಿಗಳಾಗಿದ್ದಾರೆ. 15 ವರ್ಷಗಳ ಹಿಂದೆ ಪತಿಯನ್ನು ಕೊಲೆ ಮಾಡಿ ಮನೆಯಲ್ಲಿಯೇ ಹೂತು ಹಾಕಿದ್ದರು.
ಜಯನಗರದ ಶಂಕರ್ ಸಿಂಗ್ ಎಂಬ ವ್ಯಕ್ತಿಯನ್ನು ಕೊಲೆ ಮಾಡಿ ಮನೆಯಲ್ಲಿ ಗೆ ಹೂತು ಹಾಕಲಾಗಿದ್ದು, ಈ ಕುರಿತು ಪೊಲೀಸರಿಗೆ ಅವರ ಪುತ್ರಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ತನಿಖೆ ಕಾರ್ಯಾಚರಣೆಯಲ್ಲಿ ಗಂಗಾವತಿ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವೆಂಕಟಸ್ವಾಮಿ, ಪಿಎಸ್ಐ ಶೈಲಜಾ ಹಾಗೂ ಚಿರಂಜೀವಿ, ಅನಿಲ್ ಕುಮಾರ್, ವೀರೇಶ್, ಮಹೇಶ್, ಮೈಲಾರಪ್ಪ, ನರಸಪ್ಪ, ಪ್ರಭಾಕರ್, ರಾಘವೇಂದ್ರ ಅವರಿಗೆ ಬಹುಮಾನ ಘೋಷಿಸಲಾಗಿದೆ.