alex Certify BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ 2 ಚಿರತೆಗಳು; ನಿಟ್ಟುಸಿರು ಬಿಟ್ಟ ರೈತರು, ಗ್ರಾಮಸ್ಥರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ 2 ಚಿರತೆಗಳು; ನಿಟ್ಟುಸಿರು ಬಿಟ್ಟ ರೈತರು, ಗ್ರಾಮಸ್ಥರು

ಮೈಸೂರು: ಹಲವು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸಿ ರೈತರು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ 2 ಚಿರತೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಾಂಪುರ, ಹತ್ಯಾಳು ಹಾಗೂ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆ ಕಾಟದಿಂದ ಜನರು ಆತಂಕಕ್ಕೀಡಾಗಿದ್ದರು. ಚಿರತೆ ದಾಳಿಗೆ ಗ್ರಾದಲ್ಲಿ ಹಲವು ಜಾನುವಾರುಗಳು ಬಲಿಯಾಗಿದ್ದವು. ಜನರು ಜೀವ ಭಯದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಅರಣ್ಯ ಇಲಾಖೆಗೆ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು, ರೈತರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೆಲ ಗ್ರಾಮಗಳಲ್ಲಿ ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನುಗಳನ್ನು ಇಟ್ಟಿದ್ದರು. ಇದೀಗ ನಂಜನಗೂಡು ವ್ಯಾಪ್ತಿಯ ಚಿಕ್ಕಯ್ಯನಛತ್ರದ ಹತ್ಯಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಬಿದ್ದಿದೆ.

ಇದೇ ವೇಳೆ ಟಿ.ನರಸಿಪುರ ವ್ಯಾಪ್ತಿಯ ತಲಕಾಡು ಹೋಬಳಿಯ ಕುರುಬೋಳನಹುಂಡಿಯ ಬಾಳೆತೋಟದಲ್ಲಿ ಇಡಲಾಗಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ. ಎರಡೂ ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಸದ್ಯ ರೈತರು, ಗ್ರಾಮಸ್ಥರು ಕೊಂಚ ನಿರಾಳರಾಗಿದ್ದರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...