ಮೈಸೂರಿನಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿಗೆ ಅಡ್ಡಬಂದ ವಿದ್ಯುತ್ ತಂತಿ ಸರಿಸುವ ಸಂದರ್ಭದಲ್ಲಿ ಅವಘಡ ಉಂಟಾಗಿದೆ.
ಮೈಸೂರು ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಮಹದೇವನಾಯಕ, ಮಹದೇವಸ್ವಾಮಿ ಮತ್ತು ತೇಜು ಮೃತಪಟ್ಟವರು ಎಂದು ಹೇಳಲಾಗಿದೆ. ಈ ಮೂವರು ಮೈಸೂರು ಜಿಲ್ಲೆ ಟಿ. ನರಸೀಪುರದ ಹೊಸಪುರ ಗ್ರಾಮದವರಾಗಿದ್ದಾರೆ.
ಜೋಳದ ಕಡ್ಡಿ ತುಂಬಿಕೊಂಡು ತೆರಳುತ್ತಿದ್ದ ವೇಳೆ ಲಾರಿಗೆ ಅಡ್ಡಬಂದ ವಿದ್ಯುತ್ ತಂತಿ ಸರಿಸುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ವಿದ್ಯುತ್ ಪ್ರವಹಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವರುಣಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.