alex Certify ಲಾಕ್ಡೌನ್ ಮುಂದುವರೆಯುವ ಆತಂಕದಲ್ಲಿದ್ದವರಿಗೆ ಸಚಿವರಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ಮುಂದುವರೆಯುವ ಆತಂಕದಲ್ಲಿದ್ದವರಿಗೆ ಸಚಿವರಿಂದ ಗುಡ್ ನ್ಯೂಸ್

ಲಾಕ್ಡೌನ್ ಮತ್ತೆ ಮುಂದುವರೆಯುತ್ತಾ ಎನ್ನುವ ಆತಂಕದಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇದು ಕೊನೆಯ ಲಾಕ್ಡೌನ್. ಇನ್ನು ಮುಂದೆ ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಮೈಸೂರಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನು ಮುಂದೆ ಕೊರೋನಾ ಪಾಸಿಟಿವ್ ಬಂದವರ ಮನೆಯನ್ನು ಮಾತ್ರ ಸೀಲ್ ಡೌನ್ ಮಾಡಲಾಗುವುದು. ಉಳಿದಂತೆ ಲಾಕ್ಡೌನ್ ಜಾರಿ ಮಾಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಲಾಕ್ಡೌನ್ ಮುಂದುವರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ಮೈಸೂರು ಭಾಗದಲ್ಲಿ ಹೆಚ್ಚಾಗುತ್ತಿರುವ ಕುರಿತಾಗಿ ಅಧಿಕಾರಿಗಳು ಜನಪ್ರತಿನಿಧಿಗಳ ಸಭೆ ನಡೆಸಿದ್ದು ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಸೋಂಕು ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...