ಲಾಕ್ ಡೌನ್ ಜಾರಿಯಾದ ಬಳಿಕ ಕೆಲಸ ಬಿಟ್ಟು ಊರು ಸೇರಿಕೊಂಡ ಗ್ರಾಮೀಣ ಪ್ರದೇಶದ ಜನರಿಗೆ ಗುಡ್ ನ್ಯೂಸ್ ಇಲ್ಲಿದೆ.
ಎಲ್ಲರಿಗೂ ನರೇಗಾ ಜಾಬ್ಕಾರ್ಡ್ ನೀಡಲಾಗುವುದು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ಕುಟುಂಬಕ್ಕೆ ಒಂದು ಕಾರ್ಡ್ ಎಂದು ನಿರ್ಬಂಧವಿಲ್ಲ. ಒಂದು ಕುಟುಂಬದ ಅರ್ಹ ಸದಸ್ಯರೆಲ್ಲರೂ ಜಾಬ್ ಕಾರ್ಡ್ಗೆ ಅರ್ಜಿ ಸಲ್ಲಿಸಿದರೆ ಕಾರ್ಡ್ ನೀಡಲಾಗುವುದು.
ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಮತ್ತು ಆದಾಯ ತೆರಿಗೆದಾರರನ್ನು ಹೊರತುಪಡಿಸಿ ಯಾರು ಬೇಕಾದರೂ ಜಾಬ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದೀಗ ನಿರೀಕ್ಷೆಗೂ ಮೀರಿ ಜನರು ಉದ್ಯೋಗಕ್ಕಾಗಿ ಮುಂದೆ ಬರುತ್ತಿದ್ದು, 15 ದಿನಗಳ ಒಳಗಾಗಿ ಕೂಲಿ ಮೊತ್ತವನ್ನು ಪಾವತಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ನರೇಗಾ ಕಾರ್ಮಿಕರಿಗೆ 100 ದಿನ ಕೆಲಸ ಕೊಡಲು ಸಾಧ್ಯವಾಗದಿದ್ದಾಗ ಅವರಿಗೆ ಒಂದು ತಿಂಗಳ ವೇತನ ಉಚಿತವಾಗಿ ನೀಡಲು ಕಾನೂನಿಲ್ಲಿ ಅವಕಾಶವಿದೆ. ರಾಜ್ಯ ಸರ್ಕಾರ ಇದಕ್ಕಾಗಿ ದುಡ್ಡು ಖರ್ಚು ಮಾಡಬೇಕಾಗಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಅನುದಾನ ನೀಡುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.