alex Certify ಮಾಸಾಶನ: ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸಾಶನ: ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2020ನೇ ಮೇ ತಿಂಗಳಿನಿಂದ ಮಾಸಾಶನ/ ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಸಾಹಿತಿಗಳ ಸಮಗ್ರ ಮಾಹಿತಿಯನ್ನು ಪಡೆಯಲು ನಿಗದಿತ ನಮೂನೆ ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಸೂಚಿಸಿದೆ.

ಪಿಂಚಣಿದಾರರು ಪಿಂಚಣಿ ಪಾವತಿ ಆದೇಶದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಚುನಾವಣಾ ಗುರುತಿನಚೀಟಿ, ಪಡಿತರಚೀಟಿ, ಪ.ಜಾ./ಪ.ಪಂ.ಗಳ ಕಲಾವಿದರು ಕಡ್ಡಾಯವಾಗಿ ಆರ್.ಡಿ.ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಜೂನ್-30 ರೊಳಗಾಗಿ ಇಲಾಖೆಗೆ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದು, ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-223354 ನ್ನು ಸಂಪರ್ಕಿಸುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...