alex Certify ‌ʼಲಾಕ್‌ ಡೌನ್ʼ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌ʼಲಾಕ್‌ ಡೌನ್ʼ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವ ಜನ

ರಾಜ್ಯದಲ್ಲಿ ಕೊರೊನಾ ವೈರಸ್​ ತಾಂಡವವಾಡ್ತಿದೆ. ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಡೆಡ್ಲಿ ವೈರಸ್​ ಕಾಟ ಮಿತಿಮೀರಿದೆ. ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್​ಡೌನ್​ ಹೇರಿದ್ದು ರಾಜ್ಯ ರಾಜಧಾನಿಯ ಬಹುತೇಕ ಮಂದಿ ಕಳೆದ ವರ್ಷದಂತೆಯೇ ಈ ವರ್ಷವೂ ಸಹ ತವರೂರಿಗೆ ವಾಪಸ್ಸಾಗ್ತಾ ಇದ್ದಾರೆ.

ಕೊರೊನಾ ಬಂದರೆ ವೈದ್ಯಕೀಯ ಸೌಲಭ್ಯ ಸಿಗದೇ ಹೋದರೆ ಎನ್ನುವ ಭಯ, ಲಾಕ್​ಡೌನ್​ನಿಂದಾಗಿ ಹೊಟ್ಟೆಪಾಡು ಹೇಗೆ ಎಂಬ ಆತಂಕ ಈ ಎಲ್ಲಾ ಕಾರಣಗಳಿಂದಾಗಿ ಬೆಂಗಳೂರಿನ ಬಹುತೇಕ ಮಂದಿ ಊರು ಖಾಲಿ ಮಾಡ್ತಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡ ಜನರು ಖಾಸಗಿ ವಾಹನಗಳಲ್ಲಿ, ಗೂಡ್ಸ್ ಗಾಡಿಗಳ ಮೂಲಕ ಬೆಳಗ್ಗೆಯಿಂದಲೇ ಬೆಂಗಳೂರಿನಿಂದ ಜಾಗ ಖಾಲಿ ಮಾಡ್ತಿದ್ದಾರೆ.

ಕೊರೊನಾ ʼಲಸಿಕೆʼ ಹಾಕಿಸಿಕೊಳ್ಳಲು ಹೋಗುವ ಮುನ್ನ ನಿಮಗೆ ತಿಳಿದಿರಲಿ ಈ ಬಹುಮುಖ್ಯ ಮಾಹಿತಿ

ಬೆಂಗಳೂರು ತ್ಯಜಿಸಿ ಹೊರಟವರಲ್ಲಿ ಬಹುತೇಕ ಕುಟುಂಬ ಟ್ಯಾಕ್ಸಿ ಸೇವೆ, ಬಾರ್​, ಹೋಟೆಲ್​ ಇವುಗಳನ್ನೇ ನಂಬಿಕೊಂಡಿದೆ. ಇವರೆಲ್ಲರೂ ರಾಜ್ಯ ರಾಜಧಾನಿ ಮತ್ತೆ ಮೊದಲಿನಂತೆಯೇ ಆದ ಬಳಿಕ ವಾಪಸ್ಸಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...