alex Certify ಕಳಚಿಬಿತ್ತು ಪ್ರಧಾನಿ ಮೋದಿ ‘ಆತ್ಮ ನಿರ್ಭರ’ ಮುಖವಾಡ: ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳಚಿಬಿತ್ತು ಪ್ರಧಾನಿ ಮೋದಿ ‘ಆತ್ಮ ನಿರ್ಭರ’ ಮುಖವಾಡ: ಸಿದ್ದರಾಮಯ್ಯ ಆಕ್ರೋಶ

‘ಆತ್ಮ ನಿರ್ಭರ ಭಾರತ’ ಮೂಲಕ ಸ್ಥಳೀಯ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆದರೆ ಇದೇ ವೇಳೆ ಅಖಿಲ ಭಾರತ ಕೈಮಗ್ಗ ಮಂಡಳಿಯನ್ನು ರದ್ದುಮಾಡಲಾಗಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಖಿಲ ಭಾರತ ಕೈಮಗ್ಗ ಮಂಡಳಿಯನ್ನು ರದ್ದುಪಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಮುಖವಾಡ ಕಳಚಿ ಬಿದ್ದಿದೆ ಎಂದು ಕಿಡಿಕಾರಿದ್ದಾರೆ.

ನೀತಿ-ನಿರೂಪಣೆ ಕಾರ್ಯಕ್ರಮಗಳ ಮೇಲುಸ್ತುವಾರಿ ಮತ್ತು ಕುಂದುಕೊರತೆಗಳ ನಿವಾರಣೆಯ ಕೆಲಸ ಮಾಡುತ್ತಾ ಕೇಂದ್ರ ಸರ್ಕಾರ ಮತ್ತು ನೇಕಾರರ ನಡುವೆ ಕೊಂಡಿಯಂತೆ ಇದ್ದ ಕೈಮಗ್ಗ ಮಂಡಳಿಯನ್ನು ರದ್ದು ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...