alex Certify ದುಡುಕಿದ ತಂಗಿ, ಸಹೋದರನಿಂದಲೇ ಘೋರ ಕೃತ್ಯ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಹಾಡಹಗಲೇ ನಡೆದ ಬೆಚ್ಚಿಬೀಳಿಸುವ ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಡುಕಿದ ತಂಗಿ, ಸಹೋದರನಿಂದಲೇ ಘೋರ ಕೃತ್ಯ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಹಾಡಹಗಲೇ ನಡೆದ ಬೆಚ್ಚಿಬೀಳಿಸುವ ದೃಶ್ಯ

ಹಾಡಹಗಲೇ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಬಾಮೈದನೇ ಬಾವನನ್ನು ಕೊಲೆ ಮಾಡಿದ್ದಾನೆ. ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ತಿಳಿದ ಬಾಮೈದ ಮೂವತ್ತಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾನೆ. ಸೆಪ್ಟಂಬರ್ 21 ರಂದು ಕಾಡುಗೋಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸಿಸಿ ಟಿವಿ ದೃಶ್ಯಾವಳಿ ಈಗ ಬಹಿರಂಗಗೊಂಡಿವೆ.

ರಾಜೇಶ್ ಎಂಬ ವ್ಯಕ್ತಿಯನ್ನು ಜಾನ್ ಪೌಲ್ ಹಾಗೂ ದಿನೇಶ್ ಕೊಲೆ ಮಾಡಿದ್ದಾರೆ. ಬಿಟ್ಟುಬಿಡಿ ಎಂದು ಗೋಗರೆದರೂ ಕೇಳದೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಜಾನ್ ಪೌಲ್ ತಂಗಿಯನ್ನು ರಾಜೇಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದ. ಕೌಟುಂಬಿಕ ಕಲಹದ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ಗಂಡನ ಕಿರುಕುಳದ ಬಗ್ಗೆ ಸಹೋದರನಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಹೀಗಾಗಿ ಸೆಪ್ಟಂಬರ್ 21ರಂದು ಗೆಳೆಯನೊಂದಿಗೆ ಸೇರಿ ಬಾವನನ್ನು ಕೊಲೆ ಮಾಡಿದ್ದಾನೆ. ಕಾಡುಗೋಡಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...