alex Certify ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು

ಬೆಂಗಳೂರು: ಜಿಎಸ್ಟಿ ಪರಿಹಾರ ಹಣ ಬಾಕಿ ಉಳಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಗರಂ ಆಗಿದ್ದಾರೆ.

ಮಾನ ಮರ್ಯಾದೆ ಬಿಟ್ಟು ಮಾತನಾಡುವುದನ್ನು ನಿಲ್ಲಿಸಲಿ. ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ಗರಮ್ ಆಗಿದ್ದಾರೆ. ಇವರ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಿ.ಎಸ್.ಟಿ. ಹಣವನ್ನು ಸರಿಯಾಗಿ ನೀಡಿದ್ದಾರೆಯೇ? ಶೇಕಡ 4 ರಷ್ಟು ಸಿ.ಎಸ್.ಟಿ. ಹಣವನ್ನು ರಾಜ್ಯಕ್ಕೆ ನೀಡಿರಲಿಲ್ಲ. ಇದೆಲ್ಲಾ ಸಿದ್ದರಾಮಯ್ಯನವರಿಗೆ ನೆನಪಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಮ್ಮದು ಹೇಡಿ ಸರ್ಕಾರವೆಂದು ಮಾತನಾಡುವುದನ್ನು ನಿಲ್ಲಿಸಲಿ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಕಷ್ಟದ ಪರಿಸ್ಥಿತಿ ಇದೆ. ಹಣ ನೀಡದ್ದಿದ್ದರೆ ಕಷ್ಟವಾಗುತ್ತದೆ ಎನ್ನುವ ವಿಚಾರ ಗೊತ್ತಿದೆ. ಆದರೆ, ಉಚಿತವಾಗಿ ಗ್ಯಾಸ್ ಸಿಲಿಂಡರ್, ರೇಷನ್ ನೀಡುತ್ತಿದ್ದು, ಇದರಿಂದ 3 ಲಕ್ಷ ಕೋಟಿ ರೂಪಾಯಿ ಕೇಂದ್ರ ಸರ್ಕಾರಕ್ಕೆ ಹೊರೆಯಾಗುತ್ತದೆ. ಇದನ್ನು ಸಿದ್ದರಾಮಯ್ಯ, ಪಿ. ಚಿದಂಬರಂ ಗಮನಿಸಬೇಕು ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ‌.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...