
ಬೆಂಗಳೂರು: ಆಂಧ್ರಪ್ರದೇಶದ ದಕ್ಷಿಣ, ತಮಿಳುನಾಡಿನ ಉತ್ತರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಕಂಡುಬಂದಿದ್ದು ರಾಜ್ಯದಲ್ಲಿ ನವೆಂಬರ್ 2ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಪ್ರದೇಶದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 30, 31 ರಂದು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 31 ರಿಂದ ನವೆಂಬರ್ 2ರ ವರೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.