alex Certify ಕೊರೋನಾ ಭೀತಿ ನಡುವೆ ಗುಡುಗು ಸಹಿತ ಮಳೆಯ ಅಬ್ಬರಕ್ಕೆ ಬೆಂಗಳೂರು ಜನ ತತ್ತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಭೀತಿ ನಡುವೆ ಗುಡುಗು ಸಹಿತ ಮಳೆಯ ಅಬ್ಬರಕ್ಕೆ ಬೆಂಗಳೂರು ಜನ ತತ್ತರ

ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಜನ ಕಂಗಾಲಾಗಿದ್ದಾರೆ. ಕೊರೋನಾ ಸೋಂಕಿನ ನಡುವೆ ಭಾರಿ ಮಳೆಯಾಗುತ್ತಿದ್ದು, ಗಾಳಿ ಮಳೆಯಿಂದ ಜನ ಜೀವನ ಅಲ್ಲೋಲ ಕಲ್ಲೋಲವಾಗಿದೆ.

ಬೆಂಗಳೂರಿನ ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮೊದಲೇ ಕೊರೋನಾ ಸೋಂಕಿನ ಭೀತಿಯಿಂದಾಗಿ ಬೆಂಗಳೂರಿನ ಜನ ಆತಂಕದಲ್ಲಿದ್ದಾರೆ. ಲಾಕ್ ಡೌನ್ ನಿಂದಾಗಿ ಅನೇಕ ಪ್ರದೇಶಗಳಲ್ಲಿ ಜನ ಸಂಕಷ್ಟ ಎದುರಿಸುವಂತಾಗಿದೆ.

ಇದೇ ವೇಳೆ ಭಾರೀ ಗಾಳಿ, ಗುಡುಗು ಸಹಿತ ಮಳೆಯಾಗುತ್ತಿದೆ. ತಂಪಿನ ವಾತಾವರಣದಲ್ಲಿ ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮಳೆಯಾಗುತ್ತಿರುವುದರಿಂದ ಆತಂಕ ಹೆಚ್ಚಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...