alex Certify BIG NEWS: ಗೋಕಾಕ್ ವರೆಗೂ ದೀರ್ಘದಂಡ ನಮಸ್ಕಾರ; ತೀವ್ರಗೊಂಡ ರಮೇಶ್ ಬೆಂಬಲಿಗರ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋಕಾಕ್ ವರೆಗೂ ದೀರ್ಘದಂಡ ನಮಸ್ಕಾರ; ತೀವ್ರಗೊಂಡ ರಮೇಶ್ ಬೆಂಬಲಿಗರ ಪ್ರತಿಭಟನೆ

ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣ ಸ್ಫೋಟದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದನ್ನು ಖಂಡಿಸಿ ರಮೇಶ್ ಬೆಂಬಲಿಗರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಾದ್ಯಂತ ರಮೇಶ್ ಜಾರಕಿಹೊಳಿ ಅಭಿಮಾನಿಗಳು, ಪಾದಯಾತ್ರೆ, ಪ್ರತಿಭಟನೆ, ರ್ಯಾಲಿ, ದೀರ್ಘದಂಡ ನಮಸ್ಕಾರ ಸೇರಿದಂತೆ ವಿವಿಧ ರೀತಿಯ ಧರಣಿ ನಡೆಸಿದ್ದಾರೆ.

ರಮೇಶ್ ಜಾರಕಿಹೊಳಿ ಅಭಿಮಾನಿಗಳಿಬ್ಬರು ಇದೀಗ ತವಗದಿಂದ ಗೋಕಾಕ್ ವರೆಗೆ ದೀರ್ಘದಂಡ ನಮಸ್ಕಾರ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಲಕ್ಕಪ್ಪ ಹಾಗೂ ಶ್ರೀಕಾಂತ್ ದುಂಡರಗಿ ಸೇರಿದಂತೆ ಹಲವರು ಈ ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಸಾಹುಕಾರ್ ಸಿಡಿ ಪ್ರಕರಣ; ವಿಡಿಯೋದಲ್ಲಿದ್ದ ಯುವತಿ ಪತ್ತೆ

ರಮೇಶ್ ಜಾರಕಿಹೊಳಿ ವಿರುದ್ಧ ನಕಲಿ ಸಿಡಿ ತಯಾರಿಸಿ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಬೆಂಬಲಿಗರು, ದಿನೇಶ್ ಕಲ್ಲಹಳ್ಳಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ರಮೇಶ್ ಜಾರಕಿಹೊಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...