ಶಿವಮೊಗ್ಗ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ್ ಯೋಜನೆಯಡಿ ರಾಷ್ಟ್ರೀಯ ಆಹಾರ ಭದ್ರತಾ ಹಾಗೂ ರಾಜ್ಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಚೀಟಿಯನ್ನು ಹೊಂದಿಲ್ಲದ ವಲಸಿಗರಿಗೆ ಮೇ ಮತ್ತು ಜೂನ್ 2020ರ ತಿಂಗಳಿಗೆ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆ.ಜಿ. ಅಕ್ಕಿ ಹಾಗೂ ಕಡಲೆಕಾಳುಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಲಸಿಗ ಫಲಾನುಭವಿಗಳಿಗೆ ಜೂನ್-2020ರ ಅಕ್ಕಿ ಮತ್ತು ಕಡಲೆಕಾಳನ್ನು ಜೂನ್ 1 ರಿಂದ 10 ರವರೆಗೆ ನೀಡಲಾಗುವುದು. ಮೇ ತಿಂಗಳಲ್ಲಿ ಪಡಿತರ ಪಡೆಯದವರು ಜೂನ್ ತಿಂಗಳಲ್ಲಿ ಒಟ್ಟಿಗೆ ಪಡೆಯಬಹುದು. ಫಲಾನುಭವಿಗಳು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್ ಸಂಖ್ಯೆ ನೀಡಿ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿಯನ್ನು ನ್ಯಾಯಬೆಲೆ ಅಂಗಡಿಯವರಿಗೆ ನೀಡಿ ಪಡಿತರ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.