alex Certify ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ಲಾಕ್ಡೌನ್ ಜಾರಿಯಾಗಿದ್ದರಿಂದ ಏಪ್ರಿಲ್ ನಲ್ಲಿ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲಾಗಿದೆ. ಈಗಾಗಲೇ ಶೇಕಡಾ 83 ರಷ್ಟು ಜನರಿಗೆ ಪಡಿತರ ಹಂಚಿಕೆ ಮಾಡಲಾಗಿದ್ದು ಮೇ ತಿಂಗಳಲ್ಲಿ ಮತ್ತೆ ಎರಡು ತಿಂಗಳ ಪಡಿತರವನ್ನು ವಿತರಿಸಲು ಆಹಾರ ಇಲಾಖೆ ಸಜ್ಜಾಗಿದೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಆಹಾರ ಧಾನ್ಯ ಬಿಡುಗಡೆಯಾಗಿದ್ದು, ಉಗ್ರಾಣ ನಿಗಮದಿಂದ ಸಭೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಸ್ಥಳಾಂತರ ಮಾಡಲಾಗುತ್ತಿದೆ. ಮೇ 1 ರಿಂದಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳಿಗೆ ಪಡಿತರ ನೀಡಲಿದ್ದು ಮತ್ತೆ ಎರಡು ತಿಂಗಳ ಅಕ್ಕಿ ಮತ್ತು ಬೇಳೆಯನ್ನು ವಿತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಲಾಕ್ ಡೌನ್ ಜಾರಿಯಾಗಿದ್ದರಿಂದ ಆಯಾ ಪ್ರದೇಶದಲ್ಲಿ ಉಳಿದುಕೊಂಡಿರುವ ಕಾರ್ಮಿಕರಿಗೂ ಪಡಿತರ ವಿತರಿಸಲಾಗಿದೆ. ಈಗ ನಿಯಮ ಸಡಿಲವಾಗಿ ಅವರ ಸ್ವಂತ ಊರುಗಳಿಗೆ ತೆರಳುತ್ತಿರುವ ಕಾರ್ಮಿಕರು ತಮ್ಮ ಪ್ರದೇಶದಲ್ಲಿಯೇ ಎರಡು ತಿಂಗಳ ಪಡಿತರವನ್ನು ಪಡೆಯಬಹುದಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎರಡು ತಿಂಗಳ ಪಡಿತರ ವಿತರಣೆ ಪೂರ್ಣಗೊಳಿಸುತ್ತಿದ್ದಂತೆ  ಮೇ 1 ರಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಮತ್ತೆ ಎರಡು ತಿಂಗಳ ಪಡಿತರ ಪೂರೈಕೆ ಮಾಡಲಾಗುವುದು. ಆಯಾ ಸ್ಥಳಗಳಲ್ಲಿ ಪಡಿತರ ಫಲಾನುಭವಿಗಳಿಗೆ ಎರಡು ತಿಂಗಳ ಅಕ್ಕಿ ಮತ್ತು ಬೇಳೆ ವಿತರಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...