alex Certify ಸಿಗರೇಟ್ ವಿಚಾರಕ್ಕೆ ಕಿರಿಕ್; ರಿಯಾಲಿಟಿ ಶೋ ಸ್ಪರ್ಧಿಯಿಂದ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಗರೇಟ್ ವಿಚಾರಕ್ಕೆ ಕಿರಿಕ್; ರಿಯಾಲಿಟಿ ಶೋ ಸ್ಪರ್ಧಿಯಿಂದ ಹಲ್ಲೆ

ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಸ್ಪರ್ಧಿ ರಜತ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕನ ಮೇಲೆಯೇ ರಜತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ರಿಯಾಲಿಟಿ ಶೋ ಸ್ಪರ್ಧಿ ರಜತ್, ಸಿಗರೇಟ್ ಸೇದಲೆಂದು ತಮ್ಮ ಐಷಾರಾಮಿ ಕಾರನ್ನು ಅಂಗಡಿಯೊಂದರ ಮುಂದೆ ಅಡ್ಡಲಾಗಿ ನಿಲ್ಲಿಸಿದ್ದಾರೆ. ಇದಕ್ಕೆ ಅಂಗಡಿ ಮಾಲೀಕ ಆಕ್ಷೇಪ ವ್ಯಕ್ತಪಡಿಸಿ ಅಂಗಡಿ ಮುಂದೆ ಕಾರು ನಿಲ್ಲಿಸದಂತೆ ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ರಜತ್ ಅಂಗಡಿ ಮಾಲೀಕನ ಜೊತೆ ಜಗಳ ಮಾಡಿದ್ದಾರೆ.

‘BIG BOSS’ KANNADA-8 ಇಂದಿನಿಂದ ಆರಂಭ; ಬಿಗ್ ಮನೆಗೆ ಯಾವೆಲ್ಲ ಸ್ಪರ್ಧಿಗಳು ಎಂಟ್ರಿ ಕೊಡಲಿದ್ದಾರೆ ಗೊತ್ತಾ….?

ಇಬ್ಬರ ಜಗಳ ತಾರಕ್ಕೇರಿದ್ದು, ರಜತ್ ಅಂಗಡಿ ಮಾಲೀಕ ಕಿರಣ್ ರಾಜ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅಂಗಡಿ ಮಾಲೀಕ ಕಿರಣ್ ರಾಜ್ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...