ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಬದಲಾವಣೆ ಕಂಡು ಬಂದ ಹಿನ್ನಲೆಯಲ್ಲಿ ಹಸಿರು, ಕೆಂಪು, ಕಿತ್ತಳೆ ವಲಯಗಳನ್ನು ಮರು ವಿಂಗಡಣೆ ಮಾಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಜಿಲ್ಲೆಗಳನ್ನು ಕೆಂಪು ವಲಯದಲ್ಲಿ ಸೇರಿಸಲಾಗಿದೆ. ಪ್ರಕರಣಗಳನ್ನು ಆಧರಿಸಿ ವಲಯಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು ಜಿಲ್ಲೆಗಳು ರೆಡ್ ಜೋನ್ ವ್ಯಾಪ್ತಿಯಲ್ಲಿವೆ.
ಆರೆಂಜ್ ಜೋನ್ ವ್ಯಾಪ್ತಿಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮಂಡ್ಯ, ದಕ್ಷಿಣಕನ್ನಡ, ಬಳ್ಳಾರಿ, ಧಾರವಾಡ, ಬೀದರ್, ಚಿಕ್ಕಬಳ್ಳಾಪುರ, ಉತ್ತರಕನ್ನಡ, ಗದಗ, ತುಮಕೂರು ಜಿಲ್ಲೆಗಳಿವೆ.
ಹಸಿರು ವಲಯ ವ್ಯಾಪ್ತಿಯಲ್ಲಿ ಉಡುಪಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಹಾವೇರಿ, ಕೊಡಗು, ಕೋಲಾರ, ಶಿವಮೊಗ್ಗ., ರಾಮನಗರ, ಯಾದಗಿರಿ ಕೊಪ್ಪಳ, ರಾಯಚೂರು ಜಿಲ್ಲೆಗಳಿದ್ದು, ದಾವಣಗೆರೆಯಲ್ಲಿ ಸೋಂಕಿತ ಪ್ರಕರಣಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ರೆಡ್, ಇಲ್ಲವೇ ಕಿತ್ತಳೆ ವಲಯಕ್ಕೆ ಸೇರ್ಪಡೆ ಮಾಡಲಾಗುವುದು ಎನ್ನಲಾಗಿದೆ.