alex Certify ಸೀನಿಯಾರಿಟಿ ಇಲ್ಲದವರಿಗೆ ಬಡ್ತಿ, ಪೊಲೀಸ್ ಅಧಿಕಾರಿ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೀನಿಯಾರಿಟಿ ಇಲ್ಲದವರಿಗೆ ಬಡ್ತಿ, ಪೊಲೀಸ್ ಅಧಿಕಾರಿ ರಾಜೀನಾಮೆ

ಬೆಂಗಳೂರು: ಸೀನಿಯಾರಿಟಿ ಇಲ್ಲದಿದ್ದರೂ ತನಗಿಂತ ಕಿರಿಯ ಅಧಿಕಾರಿಗೆ ಬಡ್ತಿ ನೀಡಿದ್ದರಿಂದ ಅಸಮಾಧಾನಗೊಂಡ ಹಿರಿಯ ಪೊಲೀಸ್ ಅಧಿಕಾರಿ ರಾಜೀನಾಮೆ ನೀಡಿದ್ದಾರೆ.

ರವೀಂದ್ರನಾಥ್ ಅವರು ರಾಜೀನಾಮೆ ನೀಡಿದ್ದಾರೆ. ರ್ಯಾಂಕಿಂಗ್ನಲ್ಲಿ ರವೀಂದ್ರನಾಥ್ ಅವರು ಮೊದಲು ಇದ್ದರೂ ಬಡ್ತಿ ನೀಡಿಲ್ಲ. ಹೀಗಾಗಿ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯ ಸರ್ಕಾರ ಮೂವರು ಅಧಿಕಾರಿಗಳಿಗೆ ಡಿಜಿಪಿ ರ್ಯಾಂಕ್ ಗೆ ಬಡ್ತಿ ನೀಡಿದೆ. ಅರಣ್ಯ ಇಲಾಖೆ ಎಡಿಜಿಪಿ ರವೀಂದ್ರನಾಥ್ ಅವರು ತಮಗಿಂತ ಕಿರಿಯ ಅಧಿಕಾರಿಗಳಿಗೆ ಬಡ್ತಿ ನೀಡಿರುವುದಕ್ಕೆ ಅಸಮಾಧಾನಗೊಂಡು ರಾಜೀನಾಮೆ ನೀಡಿದ್ದಾರೆ. ಡಿಜಿಗೆ ರಾಜೀನಾಮೆ ನೀಡಲು ಅವರು ಮುಂದಾಗಿದ್ದರೂ ಭೇಟಿಗೆ ಅವಕಾಶ ಸಿಗದ ಕಾರಣ ಕಂಟ್ರೋಲ್ ರೂಮ್ ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...