alex Certify ದೇವರ ದರ್ಶನ ಪಡೆಯಲಿಚ್ಛಿಸುವ ಭಕ್ತರಿಗೆ ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇವರ ದರ್ಶನ ಪಡೆಯಲಿಚ್ಛಿಸುವ ಭಕ್ತರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಜೂನ್ 1 ರಿಂದ ರಾಜ್ಯಾದ್ಯಂತ ದೇವಾಲಯಗಳು ಓಪನ್ ಆಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ದೇವಾಲಯಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ದೇಗುಲದ ಹೊರಗೆ, ಒಳಗೆ ಕೊರೊನಾ ಸೋಂಕು ತಡೆಗೆ ಔಷಧ ಸಿಂಪಡಣೆ ಮಾಡಬೇಕು. ಎರಡು ತಿಂಗಳಮಟ್ಟಿಗೆ ಹೆಚ್ಚುವರಿ ಸಿಬ್ಬಂದಿ ಆಗತ್ಯವಿದ್ದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು. ಭಕ್ತರು, ಅರ್ಚಕರು, ಅಧಿಕಾರಿಗಳಿಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

ಭಕ್ತರ ದೇಹದ ಉಷ್ಣತೆಯಲ್ಲಿ ಏರಿಕೆಯಾಗಿದ್ದರೆ ನಿಷೇಧ ಇರುತ್ತದೆ. ಮಾಸ್ಕ್ ಧರಿಸಿದವರಿಗೆ ಮಾತ್ರ ದೇಗುಲಕ್ಕೆ ಪ್ರವೇಶವಿರುತ್ತದೆ. ಸಾಮಾಜಿಕ ಅಂತರ ಪಾಲಿಸಲು ಮಾರ್ಕ್ ಮಾಡಿರಬೇಕು. ದೇವಾಲಯಗಳನ್ನು ಸ್ವಚ್ಛಗೊಳಿಸುವಲ್ಲಿ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದಿಂದ ದೇವಾಲಯಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...