alex Certify ಶಾಲೆ ಪುನರಾರಂಭ: ವಿದ್ಯಾರ್ಥಿಗಳು, ಪೋಷಕರಿಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ಪುನರಾರಂಭ: ವಿದ್ಯಾರ್ಥಿಗಳು, ಪೋಷಕರಿಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ.

ಈ ಕುರಿತಾಗಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತು ಸರ್ಕಾರ ಇದುವರೆಗೂ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸಲಹೆಯಂತೆ ರಾಜ್ಯದಲ್ಲಿ ಸೆಪ್ಟಂಬರ್ ನಲ್ಲಿ ಶಾಲೆಗಳು ಆರಂಭವಾಗುತ್ತದೆ ಎಂಬುದರ ಬಗ್ಗೆ ಸರ್ಕಾರ ಇನ್ನೂ ತೀರ್ಮಾನಿಸಿಲ್ಲ. ಶಿಕ್ಷಣ ಇಲಾಖೆಯ ಸಭೆಯಲ್ಲಿ ಇಂತಹದೊಂದು ಅಭಿಪ್ರಾಯ ವ್ಯಕ್ತವಾಗಿದೆ. ಸದ್ಯಕ್ಕಂತೂ ಶಾಲೆಗಳನ್ನು ಆರಂಭಿಸುವ ಕುರಿತು ಯಾವುದೇ ಯೋಚನೆ ತೀರ್ಮಾನ ಕೈಗೊಂಡಿಲ್ಲ. ಪೋಷಕರು, ಮಕ್ಕಳಿಗೆ ಈ ಕುರಿತಾಗಿ ಯಾವುದೇ ಆತಂಕ ಬೇಡ ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...