alex Certify ಮುಂಗಾರು ಬಿತ್ತನೆ: ರೈತರಿಗೆ ಕೃಷಿ ಸಚಿವರಿಂದ ಮತ್ತೊಂದು ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ಬಿತ್ತನೆ: ರೈತರಿಗೆ ಕೃಷಿ ಸಚಿವರಿಂದ ಮತ್ತೊಂದು ಸಿಹಿ ಸುದ್ದಿ

ಹಾವೇರಿ: ಮುಂಗಾರು ಹಂಗಾಮಿಗೆ ರೈತರ ಕೃಷಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕೃಷಿ ಇಲಾಖೆ ಕ್ರಮಕೈಗೊಂಡಿದ್ದು, ಅಗತ್ಯ ಬಿತ್ತನೆ ಬೀಜ ಪೂರೈಸಲು ಇಲಾಖೆ ಸಜ್ಜಾಗಿದೆ.

2020-21 ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಾದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಇಂದು ಕೃಷಿ ಸಚಿವ ಬಿ‌.ಸಿ.ಪಾಟೀಲ್ ಹಿರೇಕೆರೂರಿನಲ್ಲಿ ಸಾಂಕೇತಿಕವಾಗಿ ರೈತರಿಗೆ ಮುಸುಕಿನ ಜೋಳ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಿಸಿ ಚಾಲನೆ ನೀಡಿದ್ದಾರೆ.

ಬಳಿಕ ಅವರು ಮಾತನಾಡಿ, ಕಳಪೆ ಬಿತ್ತನೆ ಬೀಜ ಮಾರಾಟ ಜಾಲವನ್ನು ಬೇಧಿಸಲಾಗಿದ್ದು, ಅಧಿಕಾರಿಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರೈತರ ಬಿತ್ತನೆಗೆ ಅಗತ್ಯವಾದ ರಸಗೊಬ್ಬರ ಹಾಗೂ ಬಿತ್ತನೆಬೀಜಕ್ಕೆ ಯಾವುದೇ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು‌.ಬಿ.ಬಣಕಾರ್, ಜಂಟಿ ಕೃಷಿ ನಿರ್ದೇಶಕ ಮಂಜುನಾಥ್  ಮತ್ತಿತರರು ಇದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...