alex Certify ಲಾಕ್ಡೌನ್ ಮುಗಿದ ನಂತರ ಮೋದಿ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ: ಪ್ಯಾಕೇಜ್ ಘೋಷಣೆಗೆ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ಮುಗಿದ ನಂತರ ಮೋದಿ ಸರ್ಕಾರದಿಂದ ಮತ್ತೆ ಸಿಹಿ ಸುದ್ದಿ: ಪ್ಯಾಕೇಜ್ ಘೋಷಣೆಗೆ ಚಿಂತನೆ

 ಹಾನಗಲ್: ಕೋರೋನಾ ಸೋಂಕು ತಡೆಗೆ ಜಾರಿಯಲ್ಲಿರುವ ಲಾಕ್ ಡೌನ್ ತೆರವಾದ ನಂತರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಚಿಂತನೆ ಸರ್ಕಾರದ ಮಟ್ಟದಲ್ಲಿದೆ.

ಪ್ಯಾಕೇಜ್ ನೀಡುವುದರಿಂದ ಪ್ರಗತಿಗೆ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂಬ ಕಾರಣದಿಂದ ಸರ್ಕಾರ ಇಂತಹ ಚಿಂತನೆ ನಡೆಸಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದ್ದಾರೆ.

ಲಾಕ್ ಡೌನ್ ಸಡಿಲಗೊಳಿಸಿ ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಪ್ರಧಾನಿ ಮೋದಿ ದೇಶದ ಜನರ ಜೀವ ಮುಖ್ಯ ಎಂಬುದನ್ನು ಮನಗಂಡು ಲಾಕ್ಡೌನ್ ಜಾರಿ ಮಾಡಿದರು. ಆದರೆ ಮುಂದುವರೆದ ದೇಶಗಳಲ್ಲಿ ಆರ್ಥಿಕತೆಗೆ ಆದ್ಯತೆ ನೀಡಿದ ಕಾರಣ ಏನಾಗಿದೆ ಎಂಬುದು ಕಣ್ಣೆದುರೇ ಇದೆ ಎಂದು ಹೇಳಿದ್ದಾರೆ.

ಲಾಕ್ಡೌನ್ ನಿಂದಾಗಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುವುದು ಕಡಿಮೆಯಾಗಿದೆ. ಜನರ ಆರೋಗ್ಯದ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕಾನೂನು ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...