alex Certify ಜನ ಸಾಮಾನ್ಯರಿಗೂ ವಿಮಾನಯಾನ: ಉಡಾನ್ ಯೋಜನೆಯಡಿ ಶಿವಮೊಗ್ಗ ಏರ್ ಪೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ ಸಾಮಾನ್ಯರಿಗೂ ವಿಮಾನಯಾನ: ಉಡಾನ್ ಯೋಜನೆಯಡಿ ಶಿವಮೊಗ್ಗ ಏರ್ ಪೋರ್ಟ್

ಶಿವಮೊಗ್ಗ: ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು  2022 ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅವರು ಸೋಮವಾರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರಿಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್ ನಲ್ಲಿ ಮಂಜೂರು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರಕಾರದ ಉಡಾನ್ ಯೋಜನೆ ವ್ಯಾಪ್ತಿಯಲ್ಲಿ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನಸಾಮಾನ್ಯರಿಗೂ ಸಹ ವಿಮಾನಯಾನ  ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕಳೆದುಕೊಂಡ ಪ್ರತಿಯೊಬ್ಬರಿಗೂ ಸಮರ್ಪಕವಾದ ಪರಿಹಾರವನ್ನು ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕುವುದನ್ನು  ನಿರೀಕ್ಷಿಸಲಾಗಿದೆ. ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲು ಇದು ಪೂರಕವಾಗಲಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಶಿವಕುಮಾರ್, ಎಸ್ಪಿ ಶಾಂತರಾಜು ಮತ್ತಿತರರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...