alex Certify ಬೆತ್ತಲಾಗಿ ಬಿದ್ದಿತ್ತು ಮಹಿಳೆ ಮೃತದೇಹ: ಬೆಚ್ಚಿಬಿದ್ದ ನಿವಾಸಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆತ್ತಲಾಗಿ ಬಿದ್ದಿತ್ತು ಮಹಿಳೆ ಮೃತದೇಹ: ಬೆಚ್ಚಿಬಿದ್ದ ನಿವಾಸಿಗಳು

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿರಿವಂತೆ ಗ್ರಾಮದಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದು ಮಹಿಳೆಯನ್ನು ಕೊಲೆ ಮಾಡಲಾಗಿದೆ.

44 ವರ್ಷದ ಮಹಿಳೆ ಅಡಿಕೆ ಸುಲಿಯುವ ಕೆಲಸ ಮಾಡಿಕೊಂಡಿದ್ದು ಪುತ್ರನೊಂದಿಗೆ ವಾಸವಾಗಿದ್ದಾರೆ. ಬುಧವಾರ ಸಂಜೆ ಅವರ ಮನೆಯಿಂದ ಜೋರಾಗಿ ಕಿರುಚಾಡಿದ ಶಬ್ದ ಕೇಳಿ ಬಂದಿದೆ. ಅಕ್ಕಪಕ್ಕದ ನಿವಾಸಿಗಳು ಹಾಗೂ ಸಮೀಪದಲ್ಲೇ ವಾಸವಾಗಿರುವ ಮಹಿಳೆಯ ತಾಯಿ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದು ಮೈಮೇಲೆ ಬಟ್ಟೆ ಇರಲಿಲ್ಲ. ಕುತ್ತಿಗೆ ಭಾಗದಲ್ಲಿ ಚಾಕುವಿನಿಂದ ಕೊಯ್ದು ಕೊಲೆ ಮಾಡಿರುವುದು ಗೊತ್ತಾಗಿದೆ ಎನ್ನಲಾಗಿದೆ.

ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೂಡಲೇ ಕಾರ್ಯಪ್ರವೃತ್ತರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...