alex Certify ಬೇರೆ ಜಿಲ್ಲೆ, ಹೊರ ರಾಜ್ಯಕ್ಕೆ ಪ್ರಯಾಣ ಬೆಳೆಸುವವರಿಗೆ ಪಾಸ್: ಇಲ್ಲಿದೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇರೆ ಜಿಲ್ಲೆ, ಹೊರ ರಾಜ್ಯಕ್ಕೆ ಪ್ರಯಾಣ ಬೆಳೆಸುವವರಿಗೆ ಪಾಸ್: ಇಲ್ಲಿದೆ ‘ಗುಡ್ ನ್ಯೂಸ್’

ಶಿವಮೊಗ್ಗ: ಪಾಸ್ ಅವಶ್ಯಕತೆ ಇದ್ದವರು ಈ ಸೂಚನೆಗಳನ್ನು ಪಾಲಿಸಿ ಹೊರ ಜಿಲ್ಲೆಗೆ ಪ್ರಯಾಣ ಬೆಳೆಸಬಹುದಾಗಿದೆ.

ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲ್ಲೂಕು ಕಛೇರಿಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಒನ್ ವೇ ಒನ್ ಟೈಮ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಬೆಂಗಳೂರು ನಗರ, ಮೈಸೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಗುಲ್ಬರ್ಗ, ಬಾಗಲಕೋಟೆ ಜಿಲ್ಲೆಗಳನ್ನು ಹೊರತುಪಡಿಸಿ ಇತರ ಜಿಲ್ಲೆಗಳಿಗೆ ಪಾಸ್ ಗಳನ್ನು ವಿತರಿಸಲಾಗುವುದು.

ಶಿವಮೊಗ್ಗ ಮತ್ತು ಸಾಗರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು ಮೈಸೂರು ಜಿಲ್ಲೆಗೆ ಮಾತ್ರ ಟು ವೇ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಪ್ರಸ್ತುತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಾವಣಗೆರೆ, ಗುಲ್ಬರ್ಗ ಜಿಲ್ಲೆಗಳಿಗೆ ಮಾತ್ರ ಟು ವೇ ಪಾಸ್ ಗಳನ್ನು ಮಾತ್ರ ವಿತರಿಸಲಾಗುತ್ತಿದೆ.

ಹೊರರಾಜ್ಯದ ಜಿಲ್ಲೆಗಳಿಗಾಗಿ ಎನ್ಒಸಿಗಾಗಿ ಸೇವಾಸಿಂಧು ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ವೆಬ್ ಸೈಟ್ ವಿಳಾಸ ಇಂತಿದೆ. https://www.sevasindhu.karnataka.gov.in.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...