ಶಿವಮೊಗ್ಗ ನಗರದ ಇಮಾಮ್ ಬಾಡಾ ಮಸೀದಿಯೊಂದರಲ್ಲಿ ಸೇರಿಕೊಂಡಿದ್ದ 9 ಮಂದಿಯನ್ನು ಪೊಲೀಸರು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ರಂಜಾನ್ ಆಚರಣೆ ಆರಂಭವಾಗಿದ್ದು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಲು ವಕ್ಫ್ ಕಮಿಟಿ ಹಾಗೂ ಜಿಲ್ಲಾಡಳಿತ ಮನವಿ ಮಾಡಿದೆ. ಇದನ್ನು ಧಿಕ್ಕರಿಸಿ ಮಸೀದಿಯಲ್ಲಿ ಪ್ರಾರ್ಥನೆ ನಡೆಸಲಾಗಿದೆ.
ಮುನೀರ್ ಸೈಯದ್ ಅಪ್ಸರ್ ಸೇರಿದಂತೆ 9 ಮಂದಿ ನಿನ್ನೆ ರಾತ್ರಿ ಮಸೀದಿಯಲ್ಲಿ ಸೇರಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದು ಬಳಿಕ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.