alex Certify SHOCKING NEWS: ಗಂಟಲಲ್ಲಿ ಇಡ್ಲಿ ಸಿಲುಕಿ ಮೃತಪಟ್ಟ ವ್ಯಕ್ತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಗಂಟಲಲ್ಲಿ ಇಡ್ಲಿ ಸಿಲುಕಿ ಮೃತಪಟ್ಟ ವ್ಯಕ್ತಿ…!

ಶಿವಮೊಗ್ಗ: ಇಷ್ಟವಾದ ಬೆಳಗಿನ ಉಪಹಾರ ಇಡ್ಲಿ ಸೇವಿಸುತ್ತಿದ್ದ ವೇಳೆ ಗಂಟಲಲ್ಲಿ ಸಿಲುಕಿದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಹಳ್ಳಿಬೈಲು ಗ್ರಾಮದ ಸಂತೋಷ್ (27) ಮೃತ ದುರ್ದೈವಿ. ಮನೆಯಲ್ಲಿ ಬೆಳಗಿನ ತಿಂಡಿ ಇಡ್ಲಿ ಸೇವಿಸುತ್ತಿದ್ದಾಗ ಸಂತೋಷ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಹೃದಯಾಘಾತವಿರಬಹುದು ಎಂದು ತಕ್ಷಣ ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ಮಾರ್ಗ ಮಧ್ಯೆಯೇ ಸಂತೋಷ್ ಕೊನೆಯುಸಿರೆಳೆದಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ಸಂತೋಷ್ ಹೃದಯಾಘಾತದಿಂದ ಸಾವನ್ನಪ್ಪಿಲ್ಲ, ಇಡ್ಲಿ ಗಂಟಲಲ್ಲಿ ಸಿಲುಕಿದ್ದರಿಂದ ಉಸಿರಾಟಕ್ಕೆ ತೊಂದರೆಯಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ವಿಷಯ ತಿಳಿದ ಕುಟುಂಬದವರು ಶಾಕ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...