ಬೆಂಗಳೂರು: ಮೇ 31 ರವರೆಗೂ ಶ್ರಮಿಕ್ ರೈಲಿನಲ್ಲಿ ತೆರಳುವ ಕಾರ್ಮಿಕರ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶ್ರಮಿಕ್ ರೈಲುಗಳ ಮೂಲಕ ತಮ್ಮ ಊರುಗಳಿಗೆ ತೆರಳುವ ವಲಸೆ ಕಾರ್ಮಿಕರು ಮತ್ತು ಲಾಕ್ಡೌನ್ ಸಂದರ್ಭದಲ್ಲಿ ಸಿಲುಕಿದವರ ಪ್ರಯಾಣದ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಹೊರರಾಜ್ಯದಿಂದ ಆಗಮಿಸುವ ಕಾರ್ಮಿಕರ ಜೊತೆಗೆ ಮತ್ತು ಹೊರರಾಜ್ಯಕ್ಕೆ ತೆರಳುವ ಕಾರ್ಮಿಕರು ಹಾಗೂ ಲಾಕ್ಡೌನ್ ಸಂದರ್ಭದಲ್ಲಿ ಸಿಲುಕಿದವರ ವೆಚ್ಚವನ್ನು ಮೇ 31ರವರೆಗೆ ಭರಿಸಲಾಗುವುದು. ದೇಶದ ವಿವಿಧ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮ ರಾಜ್ಯದ ಜನ ಎಂದು ಭಾವಿಸುತ್ತೇವೆ. ಅವರ ಕಷ್ಟಕ್ಕೆ ಸ್ಪಂದಿಸಬೇಕು ಎನ್ನುವುದು ನಮ್ಮ ನಿರ್ಧಾರವಾಗಿದೆ. ಮೇ 31 ರವರೆಗೆ ಶ್ರಮಿಕ್ ರೈಲುಗಳ ಮೂಲಕ ವಲಸೆ ಕಾರ್ಮಿಕರು ಮತ್ತು ಕಷ್ಟಕ್ಕೆ ಸಿಲುಕಿದವರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.