alex Certify ಕೊರೋನಾ ಸಂಕಷ್ಟ: ನಿಷೇಧಾಜ್ಞೆ ಇದ್ದರೂ ಕಾರ್ಯಕರ್ತರ ಸಭೆ ನಡೆಸಿದ ಮಾಜಿ ಸಚಿವ, 23 ಕಾಂಗ್ರೆಸ್ ಮುಖಂಡರಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸಂಕಷ್ಟ: ನಿಷೇಧಾಜ್ಞೆ ಇದ್ದರೂ ಕಾರ್ಯಕರ್ತರ ಸಭೆ ನಡೆಸಿದ ಮಾಜಿ ಸಚಿವ, 23 ಕಾಂಗ್ರೆಸ್ ಮುಖಂಡರಿಗೆ ಶಾಕ್

ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ ಆರೋಪದ ಮೇಲೆ ಮಾಜಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಸೇರಿದಂತೆ 23 ಜನ ಕಾಂಗ್ರೆಸ್ ಮುಖಂಡರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಸುಲೇಪೇಟ ಗ್ರಾಮದ ಫಂಕ್ಷನ್ ಹಾಲ್ ನಲ್ಲಿ ಮೇ 13 ರಂದು ನಿಷೇಧಾಜ್ಞೆ ಉಲ್ಲಂಘಿಸಿ ಶರಣಪ್ರಕಾಶ ಪಾಟೀಲ ಹಾಗೂ 23 ಕಾಂಗ್ರೆಸ್ ಮುಖಂಡರು ಸಭೆ ನಡೆಸಿದ್ದರು. ಕಲಬುರಗಿ ಜಿಲ್ಲೆಯಲ್ಲಿ ನಿಷೇಧ ಜಾರಿಯಲ್ಲಿದ್ದರೂ ಅನುಮತಿ ಪಡೆಯದೆ ಕಾರ್ಯಕರ್ತರ ಸಭೆ ನಡೆಸಲಾಗಿದೆ ಎಂದು ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಆದ ಅರಣ್ಯಾಧಿಕಾರಿ ಮಹಮ್ಮದ್ ಮುನೀರ್ ದೂರು ನೀಡಿದ್ದು ಈ ಅನ್ವಯ ಕೇಸ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...