alex Certify ‘ಸಂತ್ರಸ್ತರ ಪಾಲಿಗೆ ಬಿಜೆಪಿ ಸರ್ಕಾರ ಸತ್ತಿದೆ, ವರ್ಷದ ಸಂಭ್ರಮ ಅಣಕಿಸುವಂತಿದೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಂತ್ರಸ್ತರ ಪಾಲಿಗೆ ಬಿಜೆಪಿ ಸರ್ಕಾರ ಸತ್ತಿದೆ, ವರ್ಷದ ಸಂಭ್ರಮ ಅಣಕಿಸುವಂತಿದೆ’

22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ಸರ್ಕಾರ ಸತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಹೇಳಿದರೆ ರಾಜಕೀಯ ಎನ್ನುತ್ತೀರಿ, ಮುಖ್ಯಮಂತ್ರಿಯವರೇ ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ನಿಮ್ಮ ಸರ್ಕಾರ ಸತ್ತುಹೋಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೃದಯ ಇದ್ದರೆ ಅವರ ಕಷ್ಟಗಳಿಗೆ ಸ್ಪಂದಿಸಿ. ಕಳೆದ ವರ್ಷ ಅತಿವೃಷ್ಟಿಗೆ ಮುಖ್ಯಮಂತ್ರಿಯವರು ಕೇಳಿದ್ದು 35.160 ಕೋಟಿ ರೂಪಾಯಿ. ಆದರೆ, ಪ್ರಧಾನಿ ಮೋದಿ ಕೊಟ್ಟಿದ್ದು 1869 ಕೋಟಿ ರೂಪಾಯಿ ಮಾತ್ರ ಎಂದು ಹೇಳಿದ್ದಾರೆ. ಶೆಡ್ ಗಳಲ್ಲಿ ನರಳುತ್ತಿರುವ ಸಂತ್ರಸ್ತರು, ಕುಸಿದ ಮನೆಗಳು, ಹಾಳಾದ ರಸ್ತೆಗಳು, ಮುರಿದ ಸೇತುವೆಗಳು ಬಿಜೆಪಿ ಸರ್ಕಾರದ ವರ್ಷದ ಸಂಭ್ರಮವನ್ನು ಅಣಕಿಸುವಂತೆ ಹಾಗೆಯೇ ಇವೆ. ಕಣ್ಣು ಬಿಟ್ಟು ನೋಡಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...