ಬಾದಾಮಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
4 ವರ್ಷಗಳ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವೇದಿಕೆಯಲ್ಲೇ ಮಹಿಳೆಯೊಬ್ಬರು ಕೆನ್ನೆಗೆ ಮುತ್ತು ಕೊಟ್ಟಿದ್ದರು. ಈ ಫೋಟೋ ಬಳಸಿಕೊಂಡು ಫೇಸ್ಬುಕ್ ನಲ್ಲಿ ಅಶ್ಲೀಲ ಪೋಸ್ಟ್ ಹಾಕಿದ್ದ ಬಾಗಲಕೋಟೆ ಯುವಕನನ್ನು ಬಂಧಿಸಲಾಗಿದೆ.
ಸಿದ್ದರಾಮಯ್ಯನವರಿಗೆ ಮಹಿಳೆ ಮುತ್ತುಕೊಟ್ಟ ಫೋಟೋವನ್ನು ಖ್ಯಾಡ ಗ್ರಾಮದ ಸಂಗಪ್ಪ, ಸಿದ್ದರಾಮಣ್ಣನವರ ಎಂಬ ಅಶ್ಲೀಲ ಬರಹದೊಂದಿಗೆ ಪೋಸ್ಟ್ ಮಾಡಿದ್ದ. ಈ ಬಗ್ಗೆ ಕ್ರಮ ಕೈಗೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.