alex Certify ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ಬದ್ಧವೈರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ಬದ್ಧವೈರಿಗಳು

ಬೆಂಗಳೂರು: ರಾಜಕೀಯ ವೈರಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜಕೀಯವಾಗಿ ಹಾವು-ಮುಂಗುಸಿ ರೀತಿ ಕಚ್ಚಾಡುವ ಸಿದ್ದರಾಮಯ್ಯ ಮತ್ತು ಈಶ್ವರಪ್ಪ ಸಮುದಾಯದ ಕೆಲಸದಲ್ಲಿ ವೈರತ್ವ ಮರೆತು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಾಜಕೀಯ ವೈರತ್ವ ಮರೆತ ನಾಯಕರು ಒಂದೇ ವೇದಿಕೆಯಲ್ಲಿ ಅಕ್ಕ ಪಕ್ಕ ಕುಳಿತುಕೊಂಡು ಆತ್ಮೀಯವಾಗಿ ಮಾತನಾಡಿದ್ದಾರೆ.

ಇಬ್ಬರೂ ನಾಯಕರು ಆತ್ಮೀಯವಾಗಿದ್ದರೂ ರಾಜಕೀಯವಾಗಿ ಕಚ್ಚಾಡುತ್ತಾರೆ. ರಾಜಕೀಯವಾಗಿ ಹಾವು ಮುಂಗುಸಿಯಂತೆ ಕಚ್ಚಾಡಿದರೂ ಸಮುದಾಯದ ಕೆಲಸದಲ್ಲಿ ಒಂದಾಗಿದ್ದಾರೆ.

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಸಭೆಯಲ್ಲಿ ಅವರು ಜೊತೆಯಾಗಿ ಭಾಗಿಯಾಗಿದ್ದಾರೆ. ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿಗೊಳಿಸುವಂತೆ ಸರ್ಕಾರವನ್ನು ಆಗ್ರಹಿಸಲು ಸಭೆ ನಡೆಸಲಾಗಿದೆ. ಸಭೆಯಲ್ಲಿ ವಿವಿಧ ಮಠಾಧೀಶರು, ಮುಖಂಡರು ಉಪಸ್ಥಿತರಿದ್ದಾರೆ.

ಸಿದ್ಧರಾಮಯ್ಯ ಮತ್ತು ಈಶ್ವರಪ್ಪ ಆತ್ಮೀಯರಾಗಿದ್ದರೂ ರಾಜಕೀಯವಾಗಿ ವಿರೋಧಿಗಳು. ಇಬ್ಬರ ನಡುವೆ ಆತ್ಮೀಯ ಸಂಬಂಧವಿದೆ. ಇತ್ತೀಚೆಗೆ ಸಿದ್ಧರಾಮಯ್ಯ ಆಸ್ಪತ್ರೆಯಲ್ಲಿದ್ದ ವೇಳೆ ಸಿಎಂ ಯಡಿಯೂರಪ್ಪ, ಈಶ್ವರಪ್ಪ ಜೊತೆಯಾಗಿ ತೆರಳಿ ಆರೋಗ್ಯ ವಿಚಾರಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...