alex Certify ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾದ ಅಕ್ಕ, ಆಘಾತದಿಂದ ಮೃತಪಟ್ಟ ತಂಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾದ ಅಕ್ಕ, ಆಘಾತದಿಂದ ಮೃತಪಟ್ಟ ತಂಗಿ

ಉಡುಪಿ ಜಿಲ್ಲೆ ಕಾರ್ಕಳದ ಮಾಳ ಗ್ರಾಮದಲ್ಲಿ ಅಕ್ಕ ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾಗಿದ್ದರಿಂದ ಆಘಾತಕ್ಕೊಳಗಾದ ತಂಗಿ ಮೃತಪಟ್ಟಿದ್ದಾಳೆ.

ಮಂಜಲ್ತಾರ್ ಎಂಬಲ್ಲಿ ವಾಸವಾಗಿರುವ ಯುವತಿ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದಿನಗಳಿಂದ ಆಕೆ ನಾಪತ್ತೆಯಾಗಿದ್ದು, ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ.

ಇವತ್ತು ತಂಗಿಯ ಮೊಬೈಲ್ ಗೆ ಕರೆ ಮಾಡಿದ ಅಕ್ಕ ಮನೆಯಲ್ಲಿ ನೋಡಿದ ಹುಡುಗನೊಂದಿಗೆ ಮದುವೆಯಾಗಲು ಇಷ್ಟವಿಲ್ಲದ ಕಾರಣ ಪ್ರೀತಿಸಿದ ಸಹೋದ್ಯೋಗಿ ಯುವಕನೊಂದಿಗೆ ಹೋಗಿದ್ದೇನೆ ಎಂದು ತಿಳಿಸಿದ್ದಾಳೆ.

ಅಲ್ಲದೆ ಹುಡುಕುವ ಪ್ರಯತ್ನ ಮಾಡದಂತೆ ತಂಗಿಗೆ ಹೇಳಿದ್ದಾರೆ. ಅಕ್ಕನ ಮಾತಿನಿಂದ ಆಘಾತಗೊಂಡ ತಂಗಿ ತೀವ್ರ ಅಸ್ವಸ್ಥಳಾಗಿದ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅಕ್ಕನಿಗೆ ಲಾಕ್ಡೌನ್ ಸಂದರ್ಭದಲ್ಲಿ ನಿಶ್ಚಿತಾರ್ಥ ನೆರವೇರಿದ್ದು, ಆಕೆ ಸಹೋದ್ಯೋಗಿ ಅಸ್ಸಾಂ ಮೂಲದ ಯುವಕನನ್ನು ಪ್ರೀತಿಸಿದ್ದಾಳೆ. ಇವರಿಬ್ಬರೂ ಎರಡು ದಿನಗಳ ಹಿಂದೆ ಪರಾರಿಯಾಗಿದ್ದರು. ಅಕ್ಕನ ಮಾತು ಕೇಳಿ ತಂಗಿ ಮೃತಪಟ್ಟಿದ್ದಾಳೆ ಎನ್ನಲಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...