alex Certify ಕಡಿಮೆ ಅಂಕ ಬಂದು ಉತ್ತರ ಪತ್ರಿಕೆ ತರಿಸಿಕೊಂಡ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಡಿಮೆ ಅಂಕ ಬಂದು ಉತ್ತರ ಪತ್ರಿಕೆ ತರಿಸಿಕೊಂಡ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಬಿಗ್ ಶಾಕ್

ದಾವಣಗೆರೆ ಜಿಲ್ಲೆ ತ್ಯಾವಣಿಗೆ ಸಮೀಪದ ಬೆಳಲಗೆರೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಉತ್ತರ ಪತ್ರಿಕೆಯನ್ನು ಬದಲಾವಣೆ ಮಾಡಲಾಗಿದೆ. ಅಲ್ಲದೆ ಆಕೆಯ ನೋಂದಣಿ ಸಂಖ್ಯೆಯನ್ನು ತಿದ್ದುಪಡಿ ಮಾಡಿರುವುದು ಬೆಳಕಿಗೆ ಬಂದಿದೆ.

ಬೆಳಲಗೆರೆ ಗ್ರಾಮದ ಹನುಮಂತಪ್ಪ ಅವರ ಪುತ್ರಿ ಅಕ್ಷತಾ ಕೆ.ಹೆಚ್. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವ ನಿರೀಕ್ಷೆಯಲ್ಲಿದ್ದರು. ಆದರೆ, ಸಮಾಜ ವಿಜ್ಞಾನದಲ್ಲಿ ಕೇವಲ 14 ಅಂಕ ಬಂದು ಆಕೆ ಅನುತ್ತೀರ್ಣರಾಗಿದ್ದಾರೆ.

ಬೇರೆ ವಿಷಯಗಳಲ್ಲಿ ಹೆಚ್ಚಿನ ಅಂಕ ಪಡೆದಿದ್ದ ಅಕ್ಷತಾ ಸಮಾಜ ವಿಜ್ಞಾನದಲ್ಲಿ ಕಡಿಮೆ ಅಂಕ ಪಡೆದಿದ್ದರಿಂದ ಉತ್ತರ ಪತ್ರಿಕೆಗೆ ನಕಲು ಪ್ರತಿ ಗೆ ಅರ್ಜಿ ಹಾಕಲಾಗಿದೆ. ನಕಲು ಪ್ರತಿ ನೋಡಿದಾಗ ಆಕೆಯ ನೊಂದಣಿ ಸಂಖ್ಯೆ ಬದಲಿಸಿ ಉತ್ತರ ಪತ್ರಿಕೆಯನ್ನು ಬದಲಾವಣೆ ಮಾಡಿರುವುದು ಗೊತ್ತಾಗಿದೆ. ಶಿಕ್ಷಣ ಸಚಿವರು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡಬೇಕೆಂದು ಅಕ್ಷತಾ ಅವರ ತಂದೆ ಹನುಮಂತಪ್ಪ ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: