ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದದ ವೇಳೆ ಸಚಿವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜ್ವರ ತಪಾಸಣೆ ನಡೆಸುವುದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಕ್ಕೆ ಬಂದ ವೇಳೆ ಮಕ್ಕಳ ಮಾಸ್ಕ್, ಸ್ಯಾನಿಟೈಸರ್ ಒದಗಿಸಿ ಥರ್ಮಲ್ ಸ್ಕ್ರೀನಿಂಗ್ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ತಪಾಸಣೆಗೆ ಒಳಪಡಿಸಿದ ನಂತರ ಪರೀಕ್ಷೆಗೆ ಹಾಜರುಪಡಿಸಲು ಸೂಚಿಸಲಾಗಿದೆ. ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಸದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷೆ ಬರೆಯಲು ಅಗತ್ಯವಾದ ಡೆಸ್ಕ್, ಬೆಂಚುಗಳನ್ನು ವ್ಯವಸ್ಥೆ ಮಾಡಬೇಕು. ಕಂಟೇನ್ಮೆಂಟ್ ಜೋನ್ ನಲ್ಲಿರುವ ಪರೀಕ್ಷಾ ಕೇಂದ್ರ ಸುರಕ್ಷಿತ ವಲಯಗಳಿಗೆ ಸ್ಥಳಾಂತರ ಮಾಡಬೇಕು. ಉಪ ಕೇಂದ್ರಗಳನ್ನು ಸ್ಥಾಪಿಸಿ ಪರೀಕ್ಷೆ ನಡೆಸಲು ವ್ಯವಸ್ಥೆ ಕಲ್ಪಿಸಬೇಕು. 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂರಿಸಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಹೀಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಲು ಸಚಿವರು ಸೂಚನೆ ನೀಡಿದ್ದಾರೆ.