alex Certify ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಇವತ್ತು 7034 ಜನ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಇವತ್ತು 7034 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 7883 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,96,494 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 7034 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ ಬಿಡುಗಡೆಯಾದವರ ಸಂಖ್ಯೆ 1,12,633 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 113 ಕೊರೊನಾ ಸೋಂಕಿತರ ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 3510 ಕ್ಕೆ ಏರಿಕೆಯಾಗಿದೆ. 80,343 ಸಕ್ರಿಯ ಪ್ರಕರಣಗಳಿದ್ದು ಬರೋಬ್ಬರಿ 701 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 2802 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 79,840 ಕ್ಕೆ ಏರಿಕೆಯಾಗಿದೆ. ಇಂದು 2360 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 45,034 ಜನ ಡಿಸ್ಚಾರ್ಜ್ ಆಗಿದ್ದಾರೆ. 33,489 ಸಕ್ರಿಯ ಪ್ರಕರಣಗಳಿದ್ದು, ಇವತ್ತು 23 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 1316 ಜನ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...