ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 138 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಇವತ್ತು ಒಂದೇ ದಿನ 26 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪತ್ತೆಯಾದ ಪ್ರಕರಣಗಳಲ್ಲಿ ಬಹುತೇಕ ಮಹಾರಾಷ್ಟ್ರ ಸಂಪರ್ಕ ಹೊಂದಿರುವುದು ತಿಳಿದು ಬಂದಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಹೆಚ್ಚಿನ ಮಂದಿಗೆ ಮಹಾರಾಷ್ಟ್ರದ ಸಂಪರ್ಕವಿರುವುದು ಗೊತ್ತಾಗಿದ್ದು ನಾಲ್ವರಿಗೆ ಕೊರೋನಾ ಸೋಂಕು ತಗುಲಿರುವ ಮೂಲವೇ ಪತ್ತೆಯಾಗಿಲ್ಲ.
ಇವತ್ತು 138 ಮಂದಿಗೆ ಸೋಂಕು ತಗಲಿದ್ದು 111 ಮಂದಿ ಸೋಂಕಿತರು ಮಹಾರಾಷ್ಟ್ರದಿಂದ ಬಂದ ಹಿನ್ನೆಲೆಯನ್ನು ಹೊಂದಿದವರಾಗಿದ್ದಾರೆ. 597 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 19 ಮಂದಿ ಐಸಿಯುನಲ್ಲಿದ್ದು ಒಟ್ಟು 1104 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.