ಲಾಕ್ ಡೌನ್ ಜಾರಿಯಾಗಿರುವುದರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆಯಾಗಿದೆ. ಲಾಕ್ ಡೌನ್ ಮುಗಿದ ನಂತರ ಪರೀಕ್ಷೆಯನ್ನು ಆರಂಭಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಕೈಗೊಂಡಿದೆ.
ಕೊರೋನಾ ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬೇರೆ ಬೇರೆ ಊರುಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಅವರು ಇರುವಲ್ಲಿಯೇ ಪರೀಕ್ಷೆ ನಡೆಸುವ ಸಾಧ್ಯತೆಗಳ ಕುರಿತು ಚಿಂತನೆ ನಡೆಸಿದೆ.
2019 – 20ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯನ್ನು ಜೂನ್ ನಲ್ಲಿ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಸೋಂಕು ಹರಡುವ ಸಾಧ್ಯತೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡುವ ಬದಲು ತಮ್ಮ ಊರುಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಅವರು ಇರುವ ಸ್ಥಳದಲ್ಲಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸುವ ಚಿಂತನೆ ಇದೆ.
ವಿದ್ಯಾರ್ಥಿಗಳು ರಾಜ್ಯದ ಯಾವುದೇ ಊರುಗಳಲ್ಲಿ ಇದ್ದರೂ ತಮ್ಮ ಸುತ್ತಲಿನ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ. ಈ ಕುರಿತು ಶಿಕ್ಷಣ ಇಲಾಖೆ ವತಿಯಿಂದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಪತ್ರ ಬರೆಯಲಾಗಿದೆ. ವಿದ್ಯಾರ್ಥಿಗಳಿಗೆ ಇರುವ ಸ್ಥಳದಲ್ಲೇ ಪರೀಕ್ಷೆ ಕೇಂದ್ರಗಳನ್ನು ಆಯ್ಕೆಮಾಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.