ಮಂಗಳೂರು: ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ ಮೂಡಬಿದರೆಯ ನಿವಾಸಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಮೇ 20 ರಂದು ಮುಂಬೈನಿಂದ ಬಂದ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. 58 ವರ್ಷದ ವ್ಯಕ್ತಿ ಕ್ವಾರಂಲೆಂಟೈನ್ ನಲ್ಲಿದ್ದು ಅವರು ಕೊರೋನಾ ಭಯ ಮತ್ತು ಭವಿಷ್ಯದ ಚಿಂತೆಯಿಂದ ನೇಣಿಗೆ ಶರಣಾಗಿದ್ದರು.
ಮೃತರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ವೈದ್ಯಕೀಯ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎನ್ನಲಾಗಿದೆ.