alex Certify ಕೊರೋನಾದಿಂದ ಗುಣಮುಖರಾದ ಸುಮಲತಾ ಅಂಬರೀಶ್ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾದಿಂದ ಗುಣಮುಖರಾದ ಸುಮಲತಾ ಅಂಬರೀಶ್ ಮಹತ್ವದ ಮಾಹಿತಿ

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗುಣಮುಖರಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ಸಂಪೂರ್ಣವಾಗಿ ಗುಣಮುಖಳಾಗಿದ್ದು ಪರೀಕ್ಷೆಯ ನಂತರ ಕೋವಿಡ್ ನೆಗೆಟಿವ್ ಎಂದು ವರದಿ ಬಂದಿರುವುದಾಗಿ ಹೇಳಿದ್ದಾರೆ.

ಕೋವಿಡ್ ಪಾಸಿಟಿವ್ ಆದ ಜನರು ಹೆದರಬೇಕಿಲ್ಲ. ದಯವಿಟ್ಟು ವೈದ್ಯರು ಹೇಳುವ ಎಲ್ಲ ಸಲಹೆಯನ್ನು ಚಾಚೂ ತಪ್ಪದೇ ಪಾಲಿಸಿ, ಅನುಸರಿಸಿ. ಸದಾ ಸಕಾರಾತ್ಮಕವಾಗಿ ಯೋಚಿಸಿ ಯಾವುದೇ ಕಾರಣಕ್ಕೂ ಅಧೈರ್ಯ ಪಡಬೇಡಿ. ಕೊರೋನಾ ಪಾಸಿಟಿವ್ ಅನ್ನು ನಿಮ್ಮ ಪಾಸಿಟಿವ್ ಆಲೋಚನೆಯ ಮೂಲಕ ಗೆಲ್ಲಿ. ಎಲ್ಲೇ ಇರಿ ಸೇಫ್ ಆಗಿರಿ ಎಂದು ಅವರು ತಿಳಿಸಿದ್ದಾರೆ.

ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ ಕೋವಿಡ್ ನಿಂದ ಸಂಪೂರ್ಣ ಗುಣಮುಖರಾಗಿರುವ ಅವರು  ಧನ್ಯವಾದ ಹೇಳಿದ್ದು ಇನ್ನು ನಾಲ್ಕೈದು ವಾರ ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುವುದು ಅನಿವಾರ್ಯವಾಗಿದೆ. ದೇವರ ಅನುಗ್ರಹ ಮತ್ತು ವೈದ್ಯರ ಚಿಕಿತ್ಸೆ ಸಲಹೆ ನನ್ನಲ್ಲಿ ಸಾಕಷ್ಟು ಧೈರ್ಯ ತಂದು ಕೊರೋನಾ ಗೆದ್ದು ಬರುವಲ್ಲಿ ಸಹಕಾರಿಯಾದವು. ಆದಷ್ಟು ಬೇಗ ಮತ್ತೆ ನಿಮ್ಮ ಸೇವೆಗೆ ಬರಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...