ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಮುಂದುವರೆಸಲಾಗಿದೆ. ಈ ನಡುವೆ ಎರಡು ಭಾನುವಾರ ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು.
ಆದರೆ ನಿರ್ಧಾರವನ್ನು ವಾಪಸ್ ಪಡೆಯಲಾಗಿದ್ದು, ಸಿಎಂ ಸೂಚನೆ ಮೇರೆಗೆ ಭಾನುವಾರದ ಕರ್ಫ್ಯೂ ತೆರವು ಮಾಡಲಾಗಿದ್ದು, ನಿಯಮಾನುಸಾರ ಎಲ್ಲಾ ಚಟುವಟಿಕೆಗೆ ಅವಕಾಶ ನೀಡಲಾಗಿದೆ. ಮೇ 31 ಭಾನುವಾರ ದೈನಂದಿನ ಚಟುವಟಿಕೆಗಳು ಎಂದಿನಂತೆ ಮುಂದುವರೆಯಲಿವೆ.
ಭಾನುವಾರದ ಕರ್ಫ್ಯೂವನ್ನು ಕೈಬಿಡಲಾಗಿದ್ದು ಲಾಕ್ ಡೌನ್ ನಿಯಮಗಳು ಎಂದಿನಂತೆ ಮುಂದುವರಿದಿದೆ. ಮೇ 24 ರಂದು ರಾಜ್ಯಾದ್ಯಂತ ಸಂಪೂರ್ಣ ಜಾರಿ ಮಾಡಲಾಗಿತ್ತು. ಮೇ 31 ರಂದು ಕೂಡ ಲಾಕ್ಡೌನ್ ಮುಂದುವರಿಯುವುದಾಗಿ ಹೇಳಲಾಗಿತ್ತು. ಆದರೆ, ಇಂದು ಸಂಡೇ ಲಾಕ್ಡೌನ್ ಇರುವುದಿಲ್ಲ. ದೈನಂದಿನ ಚಟುವಟಿಕೆಗಳು ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಇರುತ್ತವೆ. ವಿನಾಯಿತಿ ನೀಡಲಾದ ಎಲ್ಲಾ ವ್ಯವಹಾರ, ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.