alex Certify ಎದುರು ಮನೆ ಆಂಟಿ ಜೊತೆ ಸಂಬಂಧ ಬೆಳೆಸಿದ ಶಿಕ್ಷಕ: ಪತಿಯಿಂದಲೇ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎದುರು ಮನೆ ಆಂಟಿ ಜೊತೆ ಸಂಬಂಧ ಬೆಳೆಸಿದ ಶಿಕ್ಷಕ: ಪತಿಯಿಂದಲೇ ಘೋರ ಕೃತ್ಯ

ದಾವಣಗೆರೆ: ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಸಹೋದರನೊಂದಿಗೆ ಸೇರಿ ಪತಿಯೇ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಾದ 48 ಗಂಟೆಯೊಳಗೆ ಚನ್ನಗಿರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿರುವ ಶಿವಕುಮಾರ್ ಬಂಧಿತ ಆರೋಪಿ. ಈತನ ಪತ್ನಿ ಮತ್ತು ಆಕೆಯ ಪ್ರಿಯಕರ ಶಿಕ್ಷಕ ಕೊಲೆಯಾಗಿದ್ದಾರೆ.

ಸಹೋದರ ಶಿವರಾಜ್ ಜೊತೆಗೆ ಸೇರಿ ಶಿವಕುಮಾರ್ ಇಬ್ಬರನ್ನು ಕೊಲೆ ಮಾಡಿದ್ದಾನೆ. ಶಿವಕುಮಾರ್ 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದು ಕಾರಿಗನೂರು ಕ್ರಾಸ್ ಸಮೀಪ ವಾಸವಾಗಿದ್ದರು. ಎದುರು ಮನೆಯಲ್ಲಿ ವಾಸವಾಗಿದ್ದ ಶಿಕ್ಷಕ, ಶಿವಕುಮಾರ್ ಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾನೆ. ಈ ಕಾರಣದಿಂದ ಶಿವಕುಮಾರ್ ದಂಪತಿಯ ನಡುವೆ ಜಗಳವಾಗಿದೆ. ಕೆಲವು ದಿನಗಳ ಹಿಂದೆ ಶಿಕ್ಷಕನೊಂದಿಗೆ ಪತ್ನಿ ಓಡಿಹೋಗಿದ್ದು ಹೊನ್ನಾಳಿ, ಹರಿಹರ ಮೊದಲಾದ ಕಡೆಗಳಲ್ಲಿ ಸುತ್ತಾಡಿದ್ದಾರೆ. ಇವರನ್ನು ಗಮನಿಸಿದವರು ಶಿವಕುಮಾರ್ ಗೆ ಮಾಹಿತಿ ನೀಡಿದ್ದು, ತಮ್ಮನ ಸಹಾಯದಿಂದ ತುಂಗಭದ್ರಾ ನದಿಯಲ್ಲಿ ಪ್ರಿಯಕರನನ್ನು ಕೊಲೆ ಮಾಡಿ ಮೃತದೇಹವನ್ನು ನದಿಗೆ ಎಸೆದಿದ್ದಾರೆ.

ಬಳಿಕ ಪತ್ನಿಯನ್ನು ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಚನ್ನಗಿರಿ ತಾಲ್ಲೂಕಿನ ಸೂಳೆಕೆರೆಗೆ ಕರೆದುಕೊಂಡು ಹೋದ ಶಿವಕುಮಾರ್ ಅಲ್ಲಿಂದ ರಾಜಗೊಂಡನಹಳ್ಳಿ ಬಳಿ ಕರೆದೊಯ್ದು ಕೊಲೆ ಮಾಡಿ ಬಾವಿಗೆ ಮೃತದೇಹ ಎಸೆದು ಬೆಂಗಳೂರಿಗೆ ತೆರಳಿದ್ದಾನೆ. ಚನ್ನಗಿರಿ ಮತ್ತು ಹೊನ್ನಾಳಿ ಠಾಣೆ ಪೊಲೀಸರು ತನಿಖೆ ಕೈಗೊಂಡು ಬೆಂಗಳೂರಿನ ಸಹೋದರಿ ಮನೆಯಲ್ಲಿದ್ದ ಶಿವಕುಮಾರ್ ನನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಹನುಮಂತರಾಯ ಮಾಹಿತಿ ನೀಡಿ, ಆರೋಪಿಯನ್ನು ಬಂಧಿಸಲಾಗಿದ್ದು, ಆತನ ಸಹೋದರನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...