ಸಾಮಾಜಿಕ ಜಾಲತಾಣದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಿಯನ್ನು ಕೊಡಗು ಜಿಲ್ಲಾ ಸೈಬರ್ ಕ್ರೈಮ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ವಿರಾಜಪೇಟೆಯ ಪೊನ್ನೊತ್ತ್ ಮೊಟ್ಟೆ ನಿವಾಸಿ ನಾಸಿರ್ ಬಂಧಿತ ಆರೋಪಿ. ಈತ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ. ಅಲ್ಲದೆ ಹಲವು ಬಿಜೆಪಿ ನಾಯಕರ ವಿರುದ್ಧ ಈ ಹಿಂದೆ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.
ಬಜರಂಗದಳದ ಸಂಚಾಲಕ ವಿವೇಕ್ ರೈ ಈ ಕುರಿತಾಗಿ ವಿರಾಜಪೇಟೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.