alex Certify ಭಕ್ತರಿಗೆಲ್ಲ ರಾಜ್ಯ ಸರ್ಕಾರದಿಂದ ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತರಿಗೆಲ್ಲ ರಾಜ್ಯ ಸರ್ಕಾರದಿಂದ ಶುಭ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ರಾಜ್ಯದ ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ನಂತರದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇದೇ ವೇಳೆ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಸೆಪ್ಟೆಂಬರ್ 1 ರಿಂದ ರಾಜ್ಯದ ಎಲ್ಲಾ ದೇವಾಲಯಗಳಲ್ಲಿಯೂ ಪೂಜಾ ಕಾರ್ಯ, ಸೇವೆಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಈ ಮೊದಲಿನಂತೆಯೇ ಎಲ್ಲಾ ಸೇವೆಗಳನ್ನು ಆರಂಭಿಸಲು ಚಿಂತನೆ ನಡೆದಿದೆ. ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ ಮೊದಲಾದ ಪೂಜಾಕಾರ್ಯ ಮತ್ತು ಸೇವೆಗಳನ್ನು ಆರಂಭಿಸಲು ಯೋಜಿಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...